ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
Cross references
ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.
ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.
ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.
ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.