Cross references
ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.