ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
Cross references
ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.
ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.