ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
Cross references
ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.