ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
Cross references
ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?