ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
Cross references
ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ
ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.
ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.