ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
Cross references
ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;