ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
Cross references
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.