ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
Cross references
ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.