Home Bibles ಹಬಕ್ಕೂಕ 1:4 · ಕನ್ನಡ ಬೈಬಲ್
ಹಬಕ್ಕೂಕ 1:4 · ಕನ್ನಡ ಬೈಬಲ್

ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.

Cross references

ನಿರ್ಗಮಕಾಂಡ 23:2

ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.

ನಿರ್ಗಮಕಾಂಡ 23:6

ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.

ದ್ವಿತೀಯೋಪದೇಶಕಾಂಡ 16:19

ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.

1 ಅರಸುಗಳು 21:13

ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.

ಯೋಬ 21:7

ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?

ಕೀರ್ತನೆಗಳು 11:3

ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?

ಕೀರ್ತನೆಗಳು 22:16

ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಕೀರ್ತನೆಗಳು 58:1

ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?

ಕೀರ್ತನೆಗಳು 59:2

ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.

ಕೀರ್ತನೆಗಳು 59:4

ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.

ಕೀರ್ತನೆಗಳು 82:1

ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.

ಕೀರ್ತನೆಗಳು 94:3

ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?

ಕೀರ್ತನೆಗಳು 94:20

ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?

ಕೀರ್ತನೆಗಳು 119:126

ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.

ಯೆಶಾಯ 1:21

ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.

ಯೆಶಾಯ 5:20

ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!

ಯೆಶಾಯ 59:2

ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.

ಯೆಶಾಯ 59:13

ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.

ಯೆರೆಮಿಯ 5:27

ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.

ಯೆರೆಮಿಯ 8:7

ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?

ಯೆರೆಮಿಯ 12:1

ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;

ಯೆರೆಮಿಯ 12:6

ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್‌ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.

ಯೆರೆಮಿಯ 26:8

ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 26:21

ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 37:14

ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.

ಯೆರೆಮಿಯ 38:4

ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;

ಯೆಹೆಜ್ಕೇಲ 9:9

ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.

ಯೆಹೆಜ್ಕೇಲ 22:25

ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಹೊಶೇಯ 10:4

ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.

ಆಮೋಸ 5:7

ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,

ಆಮೋಸ 5:12

ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.

ಮೀಕ 2:1

ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.

ಮೀಕ 3:1

ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?

ಮೀಕ 7:2

ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಮತ್ತಾಯ 23:34

ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

ಮತ್ತಾಯ 26:59

ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

ಮತ್ತಾಯ 27:1

ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಮತ್ತಾಯ 27:25

ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

ಮಾರ್ಕ 7:9

ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.

ಅಪೋಸ್ತಲರ ಕೃತ್ಯಗಳು 7:52

ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

Interlinear

Choose Theme