ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
Cross references
ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?
ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.