ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
Cross references
ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.