ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
Cross references
ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ.
ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?