ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
Cross references
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.