ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
Cross references
ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.