ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
Cross references
ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.