Home Bibles ಹಗ್ಗಾಯ 2:17 · ಕನ್ನಡ ಬೈಬಲ್
ಹಗ್ಗಾಯ 2:17 · ಕನ್ನಡ ಬೈಬಲ್

ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.

Cross references

ಆದಿಕಾಂಡ 42:6

ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.

ಆದಿಕಾಂಡ 42:23

ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.

ಆದಿಕಾಂಡ 42:27

ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.

ನಿರ್ಗಮಕಾಂಡ 9:18

ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.

ದ್ವಿತೀಯೋಪದೇಶಕಾಂಡ 28:22

ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.

1 ಅರಸುಗಳು 8:37

ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ

2 ದಿನವೃತ್ತಾಂತ 6:28

ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ

2 ದಿನವೃತ್ತಾಂತ 28:22

ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.

ಯೋಬ 36:13

ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.

ಕೀರ್ತನೆಗಳು 78:46

ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು

ಯೆಶಾಯ 9:13

ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.

ಯೆಶಾಯ 28:2

ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.

ಯೆಶಾಯ 37:27

ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.

ಯೆಶಾಯ 42:25

ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಯೆಶಾಯ 62:8

ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;

ಯೆರೆಮಿಯ 3:24

ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.

ಯೆರೆಮಿಯ 5:3

ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.

ಯೆರೆಮಿಯ 6:16

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

ಯೆರೆಮಿಯ 8:4

ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.

ಹೊಶೇಯ 7:9

ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.

ಆಮೋಸ 4:6

ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.

ಆಮೋಸ 4:8

ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 4:9

ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 4:10

ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 4:11

ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಹಗ್ಗಾಯ 1:9

ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?

ಹಗ್ಗಾಯ 1:11

ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.

ಜೆಕರ್ಯ 1:2

ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.

ಜೆಕರ್ಯ 7:9

ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;

ಮಲಾಕಿ 3:11

ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಪ್ರಕಟನೆ 2:21

ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

ಪ್ರಕಟನೆ 9:20

ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.

Interlinear

Choose Theme