ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
Cross references
ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.