ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
Cross references
ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.