ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
Cross references
ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--
ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.