ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
Cross references
ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.