ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
Cross references
ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು.
ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.