ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
Cross references
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಸಹೋದರ ಪ್ರೀತಿಯು ನೆಲೆಯಾಗಿರಲಿ.
ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.