ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
Cross references
ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.