Home Bibles ಹೆಬ್ರಿಯರಿಗೆ 10:27 · ಕನ್ನಡ ಬೈಬಲ್
ಹೆಬ್ರಿಯರಿಗೆ 10:27 · ಕನ್ನಡ ಬೈಬಲ್

ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.

Cross references

ಅಂಕೆಗಳ ಪುಸ್ತಕ 16:35

ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.

ದ್ವಿತೀಯೋಪದೇಶಕಾಂಡ 32:43

ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.

1 ಸಮುವೇಲ 28:19

ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್‌ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.

ಕೀರ್ತನೆಗಳು 21:9

ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.

ಕೀರ್ತನೆಗಳು 68:1

ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.

ಯೆಶಾಯ 26:11

ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

ಯೆಶಾಯ 33:14

ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.

ಯೆರೆಮಿಯ 4:4

ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.

ಯೆಹೆಜ್ಕೇಲ 36:5

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.

ಯೆಹೆಜ್ಕೇಲ 38:19

ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್‌ ದೇಶದಲ್ಲಿ ಮಹಾಕಂಪನ ಉಂಟಾಗು ವದು;

ದಾನಿಯೇಲ 5:6

ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.

ಹೊಶೇಯ 10:8

ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.

ಯೋವೇಲ 2:30

ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.

ನಹೂಮ 1:2

ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.

ನಹೂಮ 1:5

ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.

ನಹೂಮ 1:8

ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.

ಸೆಫನ್ಯ 1:18

ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.

ಸೆಫನ್ಯ 3:8

ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 3:10

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

ಮತ್ತಾಯ 3:12

ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ಮತ್ತಾಯ 8:29

ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.

ಮತ್ತಾಯ 13:42

ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಮತ್ತಾಯ 13:50

ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.

ಮತ್ತಾಯ 25:41

ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

ಮಾರ್ಕ 9:43

ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ಲೂಕ 16:24

ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.

ಲೂಕ 19:27

ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.

ಲೂಕ 21:26

ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.

ಲೂಕ 23:30

ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.

1 ತೆಸಲೋನಿಕದವರಿಗೆ 2:15

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

2 ತೆಸಲೋನಿಕದವರಿಗೆ 1:7

ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ

ಹೆಬ್ರಿಯರಿಗೆ 2:3

ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ಹೆಬ್ರಿಯರಿಗೆ 9:27

ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಹೆಬ್ರಿಯರಿಗೆ 12:25

ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

ಹೆಬ್ರಿಯರಿಗೆ 12:29

ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

ಯಾಕೋಬ 5:3

ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.

ಪ್ರಕಟನೆ 6:15

ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು

ಪ್ರಕಟನೆ 20:15

ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

Interlinear

Choose Theme