ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
Cross references
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.