Home Bibles ಹೆಬ್ರಿಯರಿಗೆ 10:36 · ಕನ್ನಡ ಬೈಬಲ್
ಹೆಬ್ರಿಯರಿಗೆ 10:36 · ಕನ್ನಡ ಬೈಬಲ್

ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

Cross references

ಕೀರ್ತನೆಗಳು 37:7

ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.

ಕೀರ್ತನೆಗಳು 40:1

ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.

ಮತ್ತಾಯ 7:21

ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.

ಮತ್ತಾಯ 10:22

ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.

ಮತ್ತಾಯ 12:50

ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

ಮತ್ತಾಯ 21:31

ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 24:13

ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.

ಲೂಕ 8:15

ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.

ಲೂಕ 21:19

ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.

ಯೋಹಾನ 7:17

ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

ಅಪೋಸ್ತಲರ ಕೃತ್ಯಗಳು 13:22

ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ

ಅಪೋಸ್ತಲರ ಕೃತ್ಯಗಳು 13:36

ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.

ರೋಮಾಪುರದವರಿಗೆ 2:7

ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

ರೋಮಾಪುರದವರಿಗೆ 5:3

ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ

ರೋಮಾಪುರದವರಿಗೆ 8:25

ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.

ರೋಮಾಪುರದವರಿಗೆ 12:2

ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

ರೋಮಾಪುರದವರಿಗೆ 15:4

ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.

1 ಕೊರಿಂಥದವರಿಗೆ 13:7

ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.

ಗಲಾತ್ಯದವರಿಗೆ 6:9

ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.

ಎಫೆಸದವರಿಗೆ 6:6

ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.

ಕೊಲೊಸ್ಸೆಯವರಿಗೆ 1:11

ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ

ಕೊಲೊಸ್ಸೆಯವರಿಗೆ 3:24

ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.

ಕೊಲೊಸ್ಸೆಯವರಿಗೆ 4:12

ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.

1 ತೆಸಲೋನಿಕದವರಿಗೆ 1:3

ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.

ಹೆಬ್ರಿಯರಿಗೆ 6:12

ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.

ಹೆಬ್ರಿಯರಿಗೆ 6:15

ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.

ಹೆಬ್ರಿಯರಿಗೆ 6:17

ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

ಹೆಬ್ರಿಯರಿಗೆ 9:15

ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.

ಹೆಬ್ರಿಯರಿಗೆ 12:1

ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು

ಹೆಬ್ರಿಯರಿಗೆ 13:21

ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.

ಯಾಕೋಬ 1:3

ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

ಯಾಕೋಬ 5:7

ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

1 ಪೇತ್ರ 1:9

ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

1 ಯೋಹಾನ 2:17

ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.

ಪ್ರಕಟನೆ 13:10

ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.

ಪ್ರಕಟನೆ 14:12

ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.

Interlinear

Choose Theme