ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
Cross references
ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.