ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
Cross references
ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.
ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.