ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
Cross references
ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.