ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
Cross references
ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.
ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.