ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
Cross references
ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ