ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
Cross references
ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳೆಲ್ಲಾ ಮಾಡಿದರು.ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.