ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
Cross references
ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ--
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.