ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
Cross references
ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.
ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.