ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
Cross references
ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.