Home Bibles ಹೆಬ್ರಿಯರಿಗೆ 11:37 · ಕನ್ನಡ ಬೈಬಲ್
ಹೆಬ್ರಿಯರಿಗೆ 11:37 · ಕನ್ನಡ ಬೈಬಲ್

ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.

Cross references

1 ಸಮುವೇಲ 22:17

ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.

1 ಅರಸುಗಳು 18:4

ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)

1 ಅರಸುಗಳು 18:13

ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?

1 ಅರಸುಗಳು 19:1

ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,

1 ಅರಸುಗಳು 19:10

ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.

1 ಅರಸುಗಳು 19:14

ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.

1 ಅರಸುಗಳು 21:10

ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.

1 ಅರಸುಗಳು 21:13

ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.

2 ಅರಸುಗಳು 1:8

ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.

2 ದಿನವೃತ್ತಾಂತ 24:21

ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.

ಯೆರೆಮಿಯ 2:30

ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

ವಿಲಾಪಗಳು 4:13

ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.

ಜೆಕರ್ಯ 13:9

ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

ಮತ್ತಾಯ 3:4

ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.

ಮತ್ತಾಯ 8:20

ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.

ಮತ್ತಾಯ 21:35

ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

ಮತ್ತಾಯ 23:35

ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

ಲೂಕ 11:51

ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಲೂಕ 13:34

ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

ಯೋಹಾನ 10:31

ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.

ಅಪೋಸ್ತಲರ ಕೃತ್ಯಗಳು 7:52

ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ಅಪೋಸ್ತಲರ ಕೃತ್ಯಗಳು 7:58

ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.

ಅಪೋಸ್ತಲರ ಕೃತ್ಯಗಳು 12:2

ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.

ಅಪೋಸ್ತಲರ ಕೃತ್ಯಗಳು 14:19

ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.

1 ಕೊರಿಂಥದವರಿಗೆ 4:9

ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.

2 ಕೊರಿಂಥದವರಿಗೆ 11:23

ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

2 ಕೊರಿಂಥದವರಿಗೆ 12:10

ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.

ಹೆಬ್ರಿಯರಿಗೆ 12:1

ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು

ಯಾಕೋಬ 5:10

ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.

ಪ್ರಕಟನೆ 11:3

ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.

Interlinear

Choose Theme