ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
Cross references
ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು.
ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.