Home Bibles ಹೆಬ್ರಿಯರಿಗೆ 11:6 · ಕನ್ನಡ ಬೈಬಲ್
ಹೆಬ್ರಿಯರಿಗೆ 11:6 · ಕನ್ನಡ ಬೈಬಲ್

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.

Cross references

ಆದಿಕಾಂಡ 15:1

ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

ಅಂಕೆಗಳ ಪುಸ್ತಕ 14:11

ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?

ಅಂಕೆಗಳ ಪುಸ್ತಕ 20:12

ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.

ರೂತ 2:12

ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್‌ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.

1 ದಿನವೃತ್ತಾಂತ 28:9

ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.

ಯೋಬ 21:14

ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.

ಕೀರ್ತನೆಗಳು 58:11

ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.

ಕೀರ್ತನೆಗಳು 73:28

ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.

ಕೀರ್ತನೆಗಳು 78:22

ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.

ಕೀರ್ತನೆಗಳು 78:32

ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.

ಕೀರ್ತನೆಗಳು 105:3

ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.

ಕೀರ್ತನೆಗಳು 106:21

ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ

ಕೀರ್ತನೆಗಳು 106:24

ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.

ಕೀರ್ತನೆಗಳು 119:10

ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.

ಸಾಮೇತಿಗಳು 8:17

ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.

ಸಾಮೇತಿಗಳು 11:18

ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.

ಪರಮಗೀತ 3:1

ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.

ಯೆಶಾಯ 7:9

ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.

ಯೆಶಾಯ 55:3

ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.

ಯೆರೆಮಿಯ 2:31

ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.

ಯೆರೆಮಿಯ 29:13

ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.

ಮತ್ತಾಯ 5:12

ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

ಮತ್ತಾಯ 6:1

ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.

ಮತ್ತಾಯ 6:5

ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

ಮತ್ತಾಯ 6:16

ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಮತ್ತಾಯ 10:41

ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

ಮಾರ್ಕ 16:17

ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;

ಲೂಕ 6:35

ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,

ಲೂಕ 12:31

ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.

ಯೋಹಾನ 3:18

ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

ಯೋಹಾನ 8:24

ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ರೋಮಾಪುರದವರಿಗೆ 10:14

ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?

ಗಲಾತ್ಯದವರಿಗೆ 5:6

ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಹೆಬ್ರಿಯರಿಗೆ 3:12

ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

ಹೆಬ್ರಿಯರಿಗೆ 3:18

ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.

ಹೆಬ್ರಿಯರಿಗೆ 4:2

ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

ಹೆಬ್ರಿಯರಿಗೆ 4:6

ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.

ಹೆಬ್ರಿಯರಿಗೆ 7:19

ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.

Interlinear

Choose Theme