ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.
ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.
ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.
ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.