ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
Cross references
ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?