ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
Cross references
ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.