ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
Cross references
ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.