ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
Cross references
ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.