ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
Cross references
ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.