ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
Cross references
ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.
ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.