ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
Cross references
ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.
ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.