ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
Cross references
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.
ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.
ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.