Home Bibles ಹೆಬ್ರಿಯರಿಗೆ 13:5 · ಕನ್ನಡ ಬೈಬಲ್
ಹೆಬ್ರಿಯರಿಗೆ 13:5 · ಕನ್ನಡ ಬೈಬಲ್

ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.

Cross references

ಆದಿಕಾಂಡ 28:15

ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.

ಆದಿಕಾಂಡ 30:31

ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;

ನಿರ್ಗಮಕಾಂಡ 2:21

ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.

ನಿರ್ಗಮಕಾಂಡ 20:17

ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 31:6

ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 31:8

ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.

ಯೆಹೋಶುವ 1:5

ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.

ಯೆಹೋಶುವ 7:21

ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್‌ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.

1 ಸಮುವೇಲ 12:22

ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.

1 ದಿನವೃತ್ತಾಂತ 28:20

ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.

ಕೀರ್ತನೆಗಳು 10:3

ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.

ಕೀರ್ತನೆಗಳು 37:25

ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.

ಕೀರ್ತನೆಗಳು 37:28

ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.

ಕೀರ್ತನೆಗಳು 119:36

ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.

ಯೆಶಾಯ 41:10

ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಯೆಶಾಯ 41:17

ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್‌ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.

ಯೆರೆಮಿಯ 6:13

ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.

ಯೆಹೆಜ್ಕೇಲ 33:31

ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.

ಮತ್ತಾಯ 6:25

ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ

ಮತ್ತಾಯ 6:34

ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಮಾರ್ಕ 7:22

ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ

ಲೂಕ 3:14

ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.

ಲೂಕ 8:14

ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.

ಲೂಕ 12:15

ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

ಲೂಕ 16:13

ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.

ರೋಮಾಪುರದವರಿಗೆ 1:29

ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ

1 ಕೊರಿಂಥದವರಿಗೆ 5:11

ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.

1 ಕೊರಿಂಥದವರಿಗೆ 6:10

ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.

ಎಫೆಸದವರಿಗೆ 5:3

ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.

ಎಫೆಸದವರಿಗೆ 5:5

ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.

ಫಿಲಿಪ್ಪಿಯವರಿಗೆ 4:11

ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.

ಕೊಲೊಸ್ಸೆಯವರಿಗೆ 3:5

ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.

1 ತಿಮೋಥೆಯ 3:3

ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.

1 ತಿಮೋಥೆಯ 6:6

ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.

2 ಪೇತ್ರ 2:3

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.

2 ಪೇತ್ರ 2:14

ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

ಯೂದ 1:11

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

Interlinear

Choose Theme