ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
Cross references
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ